ಫೆಬ್ರುವರಿ 13ರಂದು ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಹೆಬ್ಬಾಳದಲ್ಲಿ ಶೇ.46ರಷ್ಟು, ದೇವದುರ್ಗದಲ್ಲಿ 61ರಷ್ಟು, ಬೀದರ್ ಕ್ಷೇತ್ರದಲ್ಲಿ ಶೇ.56ರಷ್ಟು ಮತದಾನವಾಗಿತ್ತು. ಬೀದರ್ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ (ಬಿಜೆಪಿ), ಹೆಬ್ಬಾಳದ(ಬಿಜೆಪಿ) ಶಾಸಕರಾಗಿದ್ದ ಜಗದೀಶ್ ಕುಮಾರ್, ದೇವದುರ್ಗದ(ಕಾಂಗ್ರೆಸ್) ಶಾಸಕ ವೆಂಕಟೇಶ್ ನಾಯಕ್ ನಿಧನವಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಇದರಂತೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಿದ್ದು, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.