ಪಕ್ಷಗಳ ಪ್ರತಿಷ್ಠೆ ಪ್ರಶ್ನೆಯಾಗಿದ್ದ ರಾಜ್ಯ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿರುವ ಅವರು, ಉಪಚುನಾವಣೆಯ ಆಯ್ಕೆ ಪ್ರಕ್ರಿಯೆಯಿಂದಲೂ ಕಾಂಗ್ರೆಸ್ ನಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಆಯ್ಕೆ ಪ್ರಕ್ರಿಯೆಲ್ಲಿಯೂ ನಾಯಕರಲ್ಲಿ ಹಲವು ಗೊಂದಲಗಳಿದ್ದವು. ಅಲ್ಲದೆ, ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ ಮುಸ್ಲಿಮರನ್ನು ಓಲೈಕೆ ಮಾಡಲು ಪ್ರಯತ್ನ ಪಟ್ಟಿತ್ತು. ಈ ಎಲ್ಲಾ ಅಂಶಗಳು ಕಾಂಗ್ರೆಸ್ ಮುಳುವಾಗಿ ನಮ್ಮ ಗೆಲುವಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.