ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯಿದ್ದರೂ ಕೂಡ ಆತನಿಗೆ ಓದಲು ಸೌಲಭ್ಯವಿರಲಿಲ್ಲ. ಇಂದಿಗೂ ಈತನ ಕುಟುಂಬ ಕಡುಬಡತನದಲ್ಲಿ ಜೀವನ ನಡೆಸುತ್ತಿದ್ದು, ಗುಡಿಸಲಿನಲ್ಲೇ ಜೀವನ ನಡೆಸುತ್ತಿದೆ. ಹರೀಶ್ ಸಹೋದರ ಗಿರೀಶ್ ಆಟೋ ಓಡಿಸಿ ಬಂದ ಹಣದಲ್ಲಿ ಮನೆಯನ್ನು ನೋಡಿಕೊಳ್ಳುತ್ತಿದ್ದಾರೆ. ಕುಟುಂಬದ ಕಷ್ವವನ್ನು ಅರ್ಥಮಾಡಿಕೊಂಡಿದ್ದ ಹರೀಶ್, ಬೆಂಗಳೂರಿನ ತನ್ನ ದೊಡ್ಡಪ್ಪನ ಮನೆಗೆ ಬಂದು ನಗರದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದ. ಇದರಂತೆ ಆತನ ಕುಟುಂಬ ಗುಬ್ಬಿ ತಾಲೂಕಿನಲ್ಲೇ ಇದ್ದರಿಂದ ತಾಯಿ ಗೀತಮ್ಮ ಹಾಗೂ ಅಣ್ಣ ಗಿರೀಶ್ ನನ್ನು ನೋಡಲು ರಜಾ ಸಿಕ್ಕಾಗಲೆಲ್ಲಾ ಹೋಗಿ ಬರುತ್ತಿದ್ದ.