ಸಭೆಯಲ್ಲಿ ಪರಿಶಿಷ್ಟ ಜಾತಿ ಪಂಗಡ ವಿದ್ಯಾರ್ಥಿಗಳ ಕುಂದು ಕೊರತೆ ನಿವಾರಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ, ತಾರತಮ್ಯ ಹೋಗಲಾಡಿಸಲು ಅಧಿಕಾರಿಗಳನ್ನು ನೇಮಕ ಮಾಡಿರುವ ಬಗ್ಗೆ, ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2012ರ ಯುಜಿಸಿ ನಿರ್ದೇಶನಗಳನ್ನು ವಿಶ್ವವಿದ್ಯಾಲಯಗಳಲ್ಲಿ ಪಾಲಿಸಲಾಗಿದೆಯೇ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.