ಬೆಂಗಳೂರಿನಲ್ಲಿ ಶುಕ್ರವಾರ ಲೋಕಾಯುಕ್ತ ಆಯ್ಕೆ ಸಮಿತಿ ಸಭೆ ಕರೆಯಲಾಗಿತ್ತು. ಚರ್ಚೆಯ ವೇಳೆ ನ್ಯಾ.ಎಸ್ ಆರ್ ನಾಯಕ್ ಹಾಗೂ ನ್ಯಾ.ವಿಕ್ರಮ್ ಜಿತ್ ಸೇನ್ ಹೆಸರು ಪ್ರಸ್ತಾಪವಾದವು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಯಕ ಹೆಸರನ್ನು ಸೂಚಿಸಿದರು. ಇನ್ನು ಸಭೆಗೆ ಗೈರು ಹಾಜರಾಗಿದ್ದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಕೂಡ ನಾಯಕ ಹೆಸರನ್ನು ಪರಿಗಣಿಸುವಂತೆ ಪತ್ರದ ಮೂಲಕ ತಿಳಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿಧಾನಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ, ವಿಧಾನಸಭೆ ಪ್ರತಿ ಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಅವರು ನ್ಯಾ.ವಿಕ್ರಮ್ ಜಿತ್ ಸೇನ್ ಹೆಸರು ಪರಿಗಣಿಸುವಂತೆ ತಿಳಿಸಿದರು.