ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಶು ಆಹಾರ ದರದಲ್ಲಿನ ಹೆಚ್ಚಳ ಹಾಗೂ ನೌಕರರ ವೇತನ ಹೆಚ್ಚಳದ ಹೊರೆಯನ್ನು ತಗ್ಗಿಸಿಕೊಳ್ಳುವುದಕ್ಕಾಗಿ ಕೆಎಂಎಫ್ ಕಳೆದ ಎರಡು ವರ್ಷಗಳಿಂದ ಹಾಲಿನ ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ರುಪಾಯಿ ಹೆಚ್ಚಿಸಲಾಗಿದೆ ಎಂದರು.