ಪಠಾಣ್ಕೋಟ್ ವಾಯುನೆಲೆಯಲ್ಲಿರುವವರನ್ನು ಉಗ್ರರು ಒತ್ತೆಯಾಳುಗಳನ್ನಾಗಿ ಮಾಡುವ ಸಾಧ್ಯತೆ ಇದೆ ಎಂಬ ಕಾರಣದಿಂದಲೇ ಎನ್ಎಸ್ಜಿ ಕಮಾಂಡೋಗಳನ್ನು ನಿಯೋಜನೆ ಮಾಡಲಾಗಿತ್ತು. ಪಂಜಾಬ್ನ ಬಳಿಯಲ್ಲಿಯೇ ಕರಸೇನಾ ಕಮಾಂಡೋಗಳಿರುವಾಗ ಎನ್ಎಸ್ಜಿಗಳು ಬರುವವರೆಗೆ ಕಾದು ನಿಂತಿದ್ದು ಯಾಕೆ? ಎಂಬ ಪ್ರಶ್ನೆಯೆದ್ದಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಒತ್ತೆಯಾಳುಗಳನ್ನು ರಕ್ಷಿಸಲು ವಿಶೇಷ ಪರಿಶೀಲನೆ ಹೊಂದಿದವರು ಎನ್ಎಸ್ಜಿ ಕಮಾಂಡೋಗಳು. ವಾಯುಸೇನೆ ಅಧಿಕಾರಿಗಳ ಕುಟುಂಬಗಳು ಮತ್ತು ನಾಲ್ಕು ವಿದೇಶ ರಾಷ್ಟ್ರಗಳಿಂದ ಬಂದ 23 ತರಬೇತುದಾರರು ದಾಳಿ ನಡೆಯುವ ವೇಳೆ ಅಲ್ಲಿದ್ದರು. ಅಫ್ಘಾನಿಸ್ತಾನ್, ನೈಜಿರಿಯಾ, ಶ್ರೀಲಂಕಾ, ಮ್ಯಾನ್ಮಾರ್ ಮೊದಲಾದ ರಾಷ್ಟ್ರಗಳಿಂದ ಬಂದ ತರಬೇತುದಾರರಾಗಿದ್ದರು. ಎಲ್ಲರ ಹಿತ ದೃಷ್ಟಿಯಿಂದ ಎನ್ಎಸ್ಜಿ ಕಮಾಂಡೋಗಳನ್ನು ಕರೆಯಲಾಯಿತು ಎಂದು ಸಿಂಗ್ ಹೇಳಿದ್ದಾರೆ.