ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: 3 ಅಯ್ಯಪ್ಪ ಭಕ್ತರು ಸಾವು

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಯ್ಯಪ್ಪ ಭಕ್ತರು...
ಅಯ್ಯಪ್ಪಸ್ವಾಮಿ ಭಕ್ತರು
ಅಯ್ಯಪ್ಪಸ್ವಾಮಿ ಭಕ್ತರು

ಬಣವಿಕಲ್ಲು(ಬಳ್ಳಾರಿ): ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿದ್ದು, ಒಂಬತ್ತು ಮಂದಿಗೆ ಗಾಯಗಳಾಗಿವೆ.

ಶಬರಿಮಲೆ ಯಾತ್ರೆ ಮುಗಿಸಿ ಬಾಗಲಕೋಟೆ ಜಿಲ್ಲೆಯ ಭಗವತಿಗೆ ವಾಪಸ್ಸಾಗುತ್ತಿದ್ದ ವೇಳೆ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಭಗವತಿ ಗ್ರಾಮದ 24 ವರ್ಷದ ಟ್ರ್ಯಾಕ್ಸ್ ಬಸವರಾಜು, ತಿಮ್ಮಣ್ಣ ಹಾಗೂ 30 ವರ್ಷದ ಮುದಕಪ್ಪ ಎಂದು ಗುರುತಿಸಲಾಗಿದೆ.

ಖಾನಹೊಸಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com