ಇಂದು ವಿವಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಗೂ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ತಾಯಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಪ್ರಕರಣ ಸಂಬಂಧ ಕುಲಪತಿ ಹಾಗೂ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ವಿರುದ್ಧ ತೀವ್ರ ಅಸಮಾಧನ ವ್ಯಕ್ತಪಡಿಸಿದರು. ಕೇಂದ್ರ ಸಚಿವರು ಹಾಗೂ ಕುಲಪತಿಗಳು ರೋಹಿತ್ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದರು ಎಂದು ಆರೋಪಿಸಿದರು. ಅಲ್ಲದೆ ರೋಹಿತ್ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.