ಹೊಡೆದು ಹಾಕಲಾಗಿರುವ ಪ್ಯಾರಾದ ಕೆಳಭಾಗದಲ್ಲಿ ‘ನಾನೇ ಈ ಪದಗಳನ್ನು ಹೊಡೆದುಹಾಕಿದ್ದೇನೆ’ ಎಂಬುದಾಗಿ ಬರೆಯಲಾಗಿದ್ದು ಕೆಳಗೆ ರೋಹಿತ್ ಸಹಿ ಕಾಣುತ್ತಿರುವುದರಿಂದ ರೋಹಿತ್ ಅವರೇ ಈ ಪ್ಯಾರಾವನ್ನು ಹೊಡೆದುಹಾಕಿರುವ ಸಾಧ್ಯತೆ ಇದೆ. ಆದರೆ ಹೊಡೆದು ಹಾಕಿದ್ದೇಕೆ, ಅದರಲ್ಲಿ ಏನು ಬರೆಯಲಾಗಿತ್ತು ಎಂಬುದು ನಿಗೂಢವಾಗಿದೆ. ತಮ್ಮದೇ ಸಂಘಟನೆಯಾದ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಶನ್ ಬಗ್ಗೆ ರೋಹಿತ್ಗೆ ಭ್ರಮನಿರಸನವಾಗಿದ್ದ ಬಗ್ಗೆ ಈ ಪ್ಯಾರಾದಲ್ಲಿ ಇದ್ದಿರಬಹುದು ಎಂಬ ಊಹಾಪೋಹಗಳು ಹರಡಿವೆ. ಏನಿದ್ದರೂ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬರಲು ಕೆಲವು ದಿನಗಳು ಬೇಕಾಗಬಹುದು, ಬಂದ ಬಳಿಕವಷ್ಟೇ ಈ ನಿಗೂಢ ಒಡೆಯಬಹುದು ಎಂದು ವರದಿಗಳು ಹೇಳಿವೆ.