ರೋಹಿತ್ ಪ್ರಕರಣವನ್ನು ಖಂಡಿಸಿ ವಿವಿಯ ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ರಾಜಿನಾಮೆ ನೀಡುತ್ತಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರನ್ನು ವಜಾಗೊಳಿಸಬೇಕು ಎಂದು ಜೆಎಸಿ ಒತ್ತಾಯಿಸಿದೆ. ಅಲ್ಲದೆ ಒಂದು ವೇಳೆ ತನ್ನ ಬೇಡಿಕೆಯನ್ನು ಈಡೇರಿಸದಿದ್ದರೆ ಆಂಧ್ರ ಹಾಗೂ ತೆಲಂಗಾಣ ಬಂದ್ ಕರೆ ನೀಡುವುದಾಗಿ ಎಚ್ಚರಿಸಿದೆ.