"ಹೀಗಿದ್ದೂ, ನಮ್ಮ ಹಲವಾರು ನಾಗರಿಕರ ಸಾವು ಮತ್ತು ಭದ್ರತಾ ಪಡೆಗಳ ಮೇಲಿನ ದಾಳಿ ನೋವುಂಟು ಮಾಡಿದೆ. ಜಮ್ಮು ಕಾಶ್ಮೀರದಲ್ಲಿ ಕಳೆದೆರಡು ದಶಕಗಳಿಂದ ಒಳ್ಳೆಯ ಬೆಳವಣಿಗೆಗಳು ಕಂಡಿವೆ. ಅಲ್ಲಿನ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವದ ಮೂಲಕ ಕಣಿವೆಯ ಜನಗಳ ಆಕಾಂಕ್ಷೆಗಳನ್ನು ಪೂರೈಸಲು ಜನರು ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ನನ್ನ ಸಹೋದರ ಸಹೋದರಿಯರಲ್ಲಿ ಮನವಿ ಮಾಡುತ್ತೇನೆ" ಎಂದು ಸೋನಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.