ರಾಜ್ಯದಲ್ಲಿ ಮಳೆ, ಬೆಳೆ ಆಗಲಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೆಲ್ಲ ಸ್ನೇಹಿತರು, ನೆಂಟರು ಎಲ್ಲರೂ ಆತ್ಮಸ್ಥೈರ್ಯ ತುಂಬಬೇಕು. ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ.ಎಲ್ಲವನ್ನೂ ಜೀವನದಲ್ಲಿ ಎದುರಿಸಬೇಕಾಗುತ್ತದೆ. ದಯಮಾಡಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾವಿರ ವರ್ಷ ಆಯುಸ್ಸು ಎಂದು ಸಿದ್ದರಾಮಯ್ಯ ಹೇಳಿದರು.