ಕೋರ್ಟ್ ಆದೇಶದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದ್ದು, ಪ್ರತಿಪಕ್ಷಗಳ ಕೈಗೆ ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲೇ ಹಿರಿಯ ಸಚಿವರ ತುರ್ತು ಸಭೆ ನಡೆಸಿದ ಸಿಎಂ, ಜಾರ್ಜ್ ರಾಜಿನಾಮೆ ಪಡೆಯುವುದೋ ಅಥವಾ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗುವುದೋ ಎಂಬುದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.