ಬಳಿಕ ಕಲಾಪ ಆರಂಭಗೊಂಡಾಗಲೂ ವಿಪಕ್ಷಗಳ ವಿಧಾನಸಭೆಯ ಬಾವಿಗಿಳಿದು ಜಾರ್ಜ್ ರಾಜಿನಾಮೆಗೆ ಆಗ್ರಹಿಸಿದವು. ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಸಿಎಂ, ವಿಪಕ್ಷಗಳಿಗೆ ಕಾರ್ಯಾಂಗ, ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲ ಎಂದರು. ಈ ರೀತಿಯ ಪ್ರತಿಭಟನೆಯಿಂದ ಪ್ರಯೋಜನೆ ಆಗುವುದಿಲ್ಲ. ಪ್ರತಿಪಕ್ಷಗಳಿಗೆ ರಾಜ್ಯದ ಹಿತಾಸಕ್ತಿ ಮುಖ್ಯವಲ್ಲ, ಬರೇ ರಾಜಕಾರಣ, ಪ್ರಚಾರವಷ್ಟೇ ಮುಖ್ಯ ಎಂದು ವಾಗ್ದಾಳಿ ನಡೆಸಿದರು.