ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ: ಕೇಜ್ರಿವಾಲ್

ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ಧು ಅವರ ನಡೆಗೆ ಸೆಲ್ಯೂಟ್ ಹೊಡೆದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Updated on
ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ಧು ಅವರ ನಡೆಗೆ ಸೆಲ್ಯೂಟ್ ಹೊಡೆದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ತಾಂಡವವಾಡುತ್ತಿದ್ದು, ಪ್ರಾಮಾಣಿಕರಿಗೆ ಉನ್ನತ ನಾಯಕತ್ವ ಉಸಿರು ಕಟ್ಟುವ ವಾತಾವರಣ ಸೃಷ್ಟಿಸಿದೆ ಎಂದು ಮಂಗಳವಾರ ಹೇಳಿದ್ದಾರೆ. 
"ಹಿರಿಯ ನಾಯಕರ ಸರ್ವಾಧಿಕಾರಿ ಧೋರಣೆಯಿಂದ ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕ ಮತ್ತು ಒಳ್ಳೆಯ ಜನರು ಉಸಿರುಗಟ್ಟಿದ್ದಾರೆ" ಎಂದು ದೆಹಲಿಯ ಆಡಳಿತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 
ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಿದ್ಧು ಭಾರತೀಯ ಜನತಾ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗಿವೆ. 
ಸಿದ್ಧು ಇನ್ನೆರಡು ದಿನಗಳಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಅವರ ಮುಂದಿನ ರಾಜಕೀಯ ನಡೆ ಘೋಷಿಸಲಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಎಎಪಿ ನಾಯಕರೊಬ್ಬರು ಹೇಳಿದ್ದಾರೆ. 
ಈ ವರ್ಷ ಏಪ್ರಿಲ್ ನಲ್ಲಿ ನವಜೋತ್ ಸಿಂಗ್ ಸಿದ್ಧು ಅವರನ್ನು ಬಿಜೆಪಿ ರಾಜ್ಯಸಭೆಗೆ ನಾಮಕರಣ ಮಾಡಿತ್ತು. ಸೋಮವಾರ ಸದಸ್ಯತ್ವಕ್ಕೆ ಸಿದ್ದು ರಾಜೀನಾಮೆ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com