ಕಲಾಂ ಸಾವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ: ಮೋದಿ

ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದು, ಅವರ ಸಾವು
ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ
ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ
ನವದೆಹಲಿ: ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದು, ಅವರ ಸಾವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ ಎಂದಿದ್ದಾರೆ. 
"ನಮ್ಮ ಪ್ರೀತಿಯ ಡಾ. ಎ ಪಿ ಜೆ ಅಬ್ದುಲ್ ಕಲಾಂ ನಮ್ಮನ್ನಗಲಿ ಒಂದು ವರ್ಷ ಆಯಿತು ಮತ್ತು ಇದು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ. ಈ ಅದ್ಭುತ ವ್ಯಕ್ತಿತ್ವಕ್ಕೆ ನನ್ನ ಗೌರವ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 
ಕಳೆದ ವರ್ಷ ಈ ದಿನ ಶಿಲ್ಲಾಂಗ್ ನ ಭಾರತೀಯ ಪ್ರಭಂದಕ ಸಂಸ್ಥೆಯಲ್ಲಿ ಉಪನ್ಯಾಸ ನೀಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಕಲಾಂ ಮೃತಪಟ್ಟಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com