'ಬಿಗ್ ಬ್ರದರ್' ಕರ್ನಾಟಕ ಹಿಂಸೆ ನಿಲ್ಲಿಸಿ, ಮಹದಾಯಿ ತೀರ್ಪ ಒಪ್ಪಿಕೊಳ್ಳಿ: ಗೋವಾ

ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ...
ಲಕ್ಷಿಕಾಂತ್ ಪರ್ಸೆಕರ್
ಲಕ್ಷಿಕಾಂತ್ ಪರ್ಸೆಕರ್
Updated on
ಪಣಜಿ: ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ರಾಜ್ಯಕ್ಕೆ ಆಗಮಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಮತ್ತೆ ಎರಡು ದಿನಗಳ ಕಾಲ ಸ್ಥಗಿತಗೊಳಿಸಿದೆ.
ಬಿಗ್ ಬ್ರದರ್ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಿ. ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ಒಪ್ಪಿಕೊಳ್ಳಿ ಎಂದು ಗೋವಾ ಮುಖ್ಯಮಂತ್ರಿ ಲಕ್ಷಿಕಾಂತ್ ಪರ್ಸೆಕರ್ ಅವರು ಹೇಳಿದ್ದಾರೆ.
ನಾವು ಕರ್ನಾಟಕಕ್ಕೆ ಸಂಚರಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಭಯದಿಂದ ಅಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಸೆಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಗೋವಾ ಚಿಕ್ಕ ಸಹೋದರನಿದ್ದಂತೆ. ಕರ್ನಾಟಕ ನಮಗೆ ಹಿರಿಯ ಸಹೋದರ. ಹೀಗಾಗಿ ಈ ಚಿಕ್ಕ ಸಹೋದರನ ಭಾವನೆಗಳನ್ನು ಕರ್ನಾಟಕ ಅರ್ಥ ಮಾಡಿಕೊಳ್ಳಬೇಕು ಎಂದು ಗೋವಾ ಸಿಎಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com