ಪ್ರಧಾನ ಸುದ್ದಿ
ತಮಿಳುನಾಡಿನ ಕೃಷ್ಣಗಿರಿ ಬಳಿ ಭೀಕರ ಸರಣಿ ಅಪಘಾತ: 14 ಮಂದಿ ಸಾವು
ತಮಿಳುನಾಡಿನ ಕೃಷ್ಣಗಿರಿಯ ಸೂಳಗಿರಿ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು,...
ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿಯ ಸೂಳಗಿರಿ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಮಧ್ಯಾಹ್ನ ಬಸ್, ಲಾರಿ, ಕಾರು ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಗು, ಏಳು ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ
ಕೃಷ್ಣಗಿರಿಯಿಂದ ಮಾಲೂರು ಕಡೆ ತೆರಳುತ್ತಿದ್ದ ಖಾಸಾಗಿ ಬಸ್ ಗೆ ಸೂಳಗಿರಿ ಬಳಿ ಕರ್ನಾಟಕ ನೋಂದಣಿಯಿರುವ ಲಾರಿಯೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾಗಿದೆ ಎನ್ನಲಾಗಿದೆ.