1984 ರ ಸಿಖ್ ವಿರೋಧಿ ದಂಗೆಯ ಪ್ರಕರಣದ ಬಗ್ಗೆ ಕೇಂದ್ರದ ಎಸ್ ಐ ಟಿಯಿಂದ ಮರು ತನಿಖೆ

ಕೇಂದ್ರ ಸರ್ಕಾರದ ವಿಶೇಷ ತನಿಖಾ ತಂಡ(ಎಸ್ ಐಟಿ) 1984 ರ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದ 75 ಪ್ರಕರಣಗಳನ್ನು ಮರುತನಿಖೆ ನಡೆಸಲಿದೆ.
1984 ರ ಸಿಖ್ ವಿರೋಧಿ ದಂಗೆಯ ಪ್ರಕರಣದ ಬಗ್ಗೆ ಕೇಂದ್ರದ ಎಸ್ ಐ ಟಿಯಿಂದ ಮರು ತನಿಖೆ
1984 ರ ಸಿಖ್ ವಿರೋಧಿ ದಂಗೆಯ ಪ್ರಕರಣದ ಬಗ್ಗೆ ಕೇಂದ್ರದ ಎಸ್ ಐ ಟಿಯಿಂದ ಮರು ತನಿಖೆ
Updated on

ನವದೆಹಲಿ: ಕೇಂದ್ರ ಸರ್ಕಾರದ ವಿಶೇಷ ತನಿಖಾ ತಂಡ(ಎಸ್ ಐಟಿ) 1984 ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದ 75 ಪ್ರಕರಣಗಳನ್ನು ಮರುತನಿಖೆ ನಡೆಸಲಿದೆ.

ದಂಗೆಗೆ ಸಂಬಂಧಿಸಿದ 75 ಪ್ರಕರಣಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿಗೆ ಪತ್ರ ಬರೆದ ಬೆನ್ನಲ್ಲೇ ಎಸ್ಐಟಿ ಪ್ರಕರಣಗಳ ಮರುತನಿಖೆ ನಡೆಸಲು ತೀರ್ಮಾನಿಸಿದ್ದು, ಶೀಘ್ರವೇ ಮರುತನಿಖೆ ನಡೆಸಲಿದೆ.

2015 ರ ಫೆ.13 ರಂದು ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಈ ವರೆಗೂ ಒಂದೇ ಒಂದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ಅಷ್ಟೇ ಅಲ್ಲದೇ ದೆಹಲಿ ಸರ್ಕಾರ ಪರಿಣಾಮಕಾರಿ ತನಿಖಾ ತಂಡ ರಚಿಸದಂತೆ ತಡೆಯಲು ಕೇಂದ್ರ ಸರ್ಕಾರ ದೆಹಲಿ ವಿಧಾನಸಭಾ ಚುನಾವಣೆಗೂ ಎರಡು ದಿನಗಳ ಮುನ್ನ ತನಿಖಾ ತಂಡವನ್ನು ರಚಿಸಿತ್ತು. ಒಂದೋ ನೀವು ಎಸ್ ಐಟಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಿ ಇಲ್ಲವೇ ನಮಗೆ ಪರಿಣಾಮಕಾರಿಯಾದ ಎಸ್ ಐಟಿ ರಚಿಸಲು ಅವಕಾಶ ನೀಡಿ ಎಂದು ಆಗ್ರಹಿಸಿ ಅರವಿಂದ್ ಕೇಜ್ರಿವಾಲ್ ಪ್ರಧಾನಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com