ಸತತ ಎರಡನೇ ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಇಂದು ಪ್ರಧಾನಿಯನ್ನು ಭೇಟಿ ಮಾಡಿದ ಜಯಾ, ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕೊಚ್ಚಿ-ಬೆಂಗಳೂರು ಗ್ಯಾಸ್ ಪೈಪ್ ಲೈನ್ ಮಾರ್ಗ ಬದಲಾವಣೆ ಹಾಗೂ ತಮಿಳು ಭಾಷೆಗೆ ರಾಷ್ಟ್ರೀಯ ಮಾನ್ಯತೆ ಸೇರಿದಂತೆ ಒಟ್ಟು 29 ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.