ಪತ್ರಿಕಾ ವರದಿಗಳನ್ನು ಆಧರಿಸಿ ಸ್ವಯಂಪ್ರೇತಿವಾಗಿ ಈ ವಿಚಾರಣೆ ನಡೆಸಿರುವ ನ್ಯಾಯಾಧೀಶರು ರೈಲ್ವೆ ಪೊಲೀಸರು ಮತ್ತು ಪ್ರಾದೇಶಿಕ ಪೊಲೀಸರ ನಡುವೆ ಸಮನ್ವಯ ಕೊರತೆ ಇದೆಯೇ ಎಂದು ಕೇಳಿ ರಾಜ್ಯದ ಪಬ್ಲಿಕ್ ಪ್ರಾಸೆಕ್ಯೂಟರ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದ್ದಾರೆ. ಈ ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಹೇಳಿದ್ದಾರೆ ಎನ್ನಲಾಗಿರುವ ಹೇಳಿಕೆಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಪೀಠ ಪಬ್ಲಿಕ್ ಪ್ರಾಸೆಕ್ಯೂಟರ್ ಈ ಹೇಳಿಕೆಯ ಸತ್ಯಾಸತ್ಯವನ್ನು ತಿಳಿಸಲು ಹೇಳಿದ್ದು, ಕೇವಲ ಪಟ್ಟಿಯಾಗಿರುವ ಪ್ರಕರಣಗಳ ವಿಚಾರಣೆಯಷ್ಟೇ ನಮ್ಮ ಕರ್ತವ್ಯವಲ್ಲ, ಇಂತಹ ಪ್ರಕರಣಗಳನ್ನೂ ವಿಚಾರಿಸುವ ಸಾಮಾಜಿಕ ಜವಾಬ್ದಾರಿ ನಮಗಿದೆ ಎಂದಿದೆ.