ವಿಧಾನಸಭೆ ಕಲಾಪದ ಕೊನೆಯ ದಿನವಾದ ಇಂದು ಕರ್ನಾಟಕ ಲೋಕಸೇವಾ ಆಯೋಗ ವಿಧೇಯಕ, ಬಾಲ್ಯ ವಿವಾಹ ನಿಷೇಧ ಕಾಯ್ದೆ ತಿದ್ದುಪಡಿ ವಿಧೇಯಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಗಿರವಿದಾರರ ತಿದ್ದುಪಡಿ ವಿಧೇಯಕ, ರಾಜ್ಯ ಅಲ್ಪಸಂಖ್ಯಾತರ ಆಯೋಗ ತಿದ್ದುಪಡಿ ವಿಧೇಯಕ ಹಾಗೂ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ಸೇರಿದಂತೆ 7 ವಿಧೇಯಕಗಳಿಗೆ ಇಂದು ವಿಧಾಸಭೆ ಅಂಗೀಕಾರ ನೀಡಿತು. ಬಳಿಕ ಕಾಲಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಅನಿರ್ಧಿಷ್ಟಾವಧಿಗೆ ಮುಂದೂಡಿದರು. 6 ದಿನಗಳ ಕಾಲ ನಡೆದ ಕಲಾಪದಲ್ಲಿ