2011ರ ಸೆಪ್ಟೆಂಬರ್ ನಲ್ಲಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಜಯಲಕ್ಷ್ಮೀ ಅವರು, ನನ್ನ ಪತಿ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದರು ಎಂದು ದೂರು ಕೊಟ್ಟಿದ್ದರು. ಆಗ ಕೊಲೆ ಯತ್ನ ಆರೋಪದಡಿ ದರ್ಶನ್ ಅವರನ್ನು ಬಂಧಿಸಿದ್ದ ಪೊಲೀಸರು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ಒಂದು ತಿಂಗಳು ಜೈಲಿನಲ್ಲಿದ್ದ ದರ್ಶನ್, ಜಾಮೀನು ಪಡೆದು ಬಿಡುಗಡೆಯಾಗಿದ್ದರು.