ಸಣ್ಣ ನೀರಾವರಿ ಇಲಾಖೆ ಜೆಇ ಮನೆ ಮೇಲೆ 'ಲೋಕಾ' ದಾಳಿ

ಬೀದರ್ ನಗರದಲ್ಲಿನ ಸಣ್ಣ ನೀರಾವರಿ ಇಲಾಖೆ ಜೆಇ ಅಶೋಕ್ ಕೆಮಶೆಟ್ಟಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ...
ಲೋಕಾಯುಕ್ತ (ಸಂಗ್ರಹ ಚಿತ್ರ)
ಲೋಕಾಯುಕ್ತ (ಸಂಗ್ರಹ ಚಿತ್ರ)

ಬೆಂಗಳೂರು: ಬೀದರ್ ನಗರದಲ್ಲಿನ ಸಣ್ಣ ನೀರಾವರಿ ಇಲಾಖೆ ಜೆಇ ಅಶೋಕ್ ಕೆಮಶೆಟ್ಟಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬೀದರ್ ನಗರದಲ್ಲಿರುವ ವೈಷ್ಣವಿ ಕಾಲೋನಿಯಲ್ಲಿರುವ ಅಶೋಕ್ ಕೆಮಶೆಟ್ಟಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಜೆಇ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com