ಇಂದು ದೆಹಲಿಯ ಯಮುನಾ ನದಿ ತಟದ ಮೇಲೆ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ'ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ನಮ್ಮ ದೇಶದ ಸಂಸ್ಕೃತಿಯ ಬಗ್ಗೆ ನಾವು ಹೆಮ್ಮೆ ಪಡಬೇಕು. ಒಂದು ವೇಳೆ ನಮ್ಮನ್ನು ನಾವೇ ನಿಂದಿಸಿಕೊಳ್ಳುವುದಾದರೆ ಜಗತ್ತು ಏಕೆ ನಮ್ಮನ್ನು ನೋಡಬೇಕು ಎಂದು ಪ್ರಶ್ನಿಸಿದ್ದಾರೆ.