ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಐಡಿಬಿಐ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪ ಹೊತ್ತಿರುವ ಮಧ್ಯದ ದೊರೆ ವಿಜಯ್ ಮಲ್ಯ...
ವಿಜಯ್ ಮಲ್ಯ
ವಿಜಯ್ ಮಲ್ಯ
ಹೈದ್ರಾಬಾದ್: ಐಡಿಬಿಐ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪ ಹೊತ್ತಿರುವ ಮಧ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ಹೈದ್ರಾಬಾದ್ ಕೋರ್ಟ್ ವಿಜಯ್ ಮಲ್ಯ ಮತ್ತು ಕಿಂಗ್‍ಫಿಶರ್ ನ ಮುಖ್ಯ ಹಣಕಾಸು ಅಧಿಕಾರಿ ಎ.ರಘುನಾಥನ್ ವಿರುದ್ಧ ಜಾಮೀನು ರಹಿತ್ ವಾರೆಂಟ್ ಜಾರಿ ಮಾಡಿದೆ.
ಏಪ್ರಿಲ್ 13ರೊಳಗಾಗಿ ವಿಜಯ್ ಮಲ್ಯ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.
ಹೈದ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಲ್ಯ ವಿರುದ್ಧ ಪ್ರಕರಣ ದಾಖಲಿಸಿತ್ತು. ನಮ್ಮ ಸಂಸ್ಥೆಗೆ ಮಲ್ಯ ಹಣವನ್ನು ಪಾವತಿಸಬೇಕಿತ್ತು. ಹಾಗಾಗಿ, ಅವರು ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿದೆ ಎಂದು ಹೈದ್ರಾಬಾದ್ ಏರ್ ಪೋರ್ಟ್ ದೂರು ನೀಡಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈದ್ರಾಬಾದ್ ಕೋರ್ಟ್ ಏಪ್ರಿಲ್ 13ರೊಳಗಾಗಿ ಮಲ್ಯ ಅವರನ್ನು ಕೋರ್ಟ್ ಗೆ ಹಾಜರಪಡಿಸಬೇಕು ಎಂದು ಸೂಚಿಸಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com