ಸಿಐಡಿ ಉಪ ಪೊಲೀಸ್ ಮಹಾ ನಿರೀಕ್ಷಕಿ(ಡಿಐಜಿ) ಸೋನಿಯಾ ನಾರಂಗ ನೇತೃತ್ವದ ತಂಡ ಇಂದು ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಪಿಯು ಮಂಡಳಿಗೆ ಭೇಟಿ ನೀಡಿ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಆಕೃತಿ ಅವರಿಂದ ಮಾಹಿತಿ ಪಡೆದರು, ಅಲ್ಲದೆ ಸುಮಾರು 20 ನಿಮಿಷಗಳ ಕಾಲ ಪಿಯು ಮಂಡಳಿಯ ಅಧಿಕಾರಿಗಳ ವಿಚಾರಣೆ ನಡೆಸಿರುವುದಾಗಿ ಮಾಧ್ಯಮದ ಮೂಲಗಳು ತಿಳಿಸಿವೆ.