ಮಧುರೈ: ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯ್ ಕಾಂತ್ ಅವರಿಗೆ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳು ಹಣ ಸೇರಿದಂತೆ ಹಲವು ಆಮಿಷಗಳನ್ನು ಒಡ್ಡಿವೆ ಎಂದು ಎಂಡಿಎಂಕೆ ಮುಖ್ಯಸ್ಥ ವೈಕೋ ಆರೋಪಿಸಿದ್ದಾರೆ. ಆದರೆ, ವಿಜಯ್ ಕಾಂತ್ ಎಲ್ಲಾ ಆಫರ್ಗಳನ್ನು ತಳ್ಳಿಹಾಕಿ ಪೀಪಲ್ಸ್ ವೆಲ್ಫೇರ್ ಫ್ರಂಟ್ನೊಂದಿಗೆ ಕೈ ಜೋಡಿಸಿದ್ದಾರೆ ಎಂದು ಹೇಳಿದ್ದಾರೆ.
ಡಿಎಂಕೆ ಪಕ್ಷ 80 ವಿಧಾನಸಭಾ ಸೀಟುಗಳು ಮತ್ತು 500 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಮಿಷವೊಡ್ಡಿದ್ದರೆ, ಬಿಜೆಪಿ ರಾಜ್ಯಸಭಾ ಸದಸ್ಯತ್ವ ಮತ್ತು ಕೇಂದ್ರ ಸಚಿವ ಸ್ಥಾನ ನೀಡುವ ಆಮಿಷವೊಡ್ಡಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಜಯ್ ಕಾಂತ್ ಎಲ್ಲಾ ಆಫರ್ಗಳನ್ನು ತಿರಸ್ಕರಿಸಿ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಸರಕಾರ ರಚನೆಗಾಗಿ ನಮ್ಮೊಂದಿಗೆ ಕೈ ಜೋಡಿಸಿದ್ದಾರೆ. ಡಿಎಂಕೆ ಪಕ್ಷದ ಭ್ರಷ್ಟಚಾರದಿಂದ ಬಂದ ಹಣವನ್ನು ತೆಗೆದುಕೊಳ್ಳಲು ಅವರು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ. ವೈಕೋ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಡಿಎಂಕೆ ಖಜಾಂಚಿ ಎಂ.ಕೆ.ಸ್ಟಾಲಿನ್, ಪಕ್ಷ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಡಿಎಂಕೆ ಮತ್ತು ಡಿಎಂಡಿಕೆ ಪಕ್ಷಗಳ ನಡುವೆ ಮೈತ್ರಿ ಕುರಿತಂತೆ ಮಾತುಕತೆಯೇ ನಡೆದಿಲ್ಲವೆಂದಾದ ಮೇಲೆ ಹಣ, ಸೀಟು ಹಂಚಿಕೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
Advertisement