ಮೌಲ್ಯ ಮಾಪನ ಬಹಿಷ್ಕಾರ ನಿರ್ಧಾರ ಕೈಗೊಂಡಿರುವ ಅಧ್ಯಾಪಕರ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಸಿಎಂ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಈ ವೇಳೆ ಸಿಎಂ, ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಹಿಷ್ಕಾರ ನಿರ್ಧಾರ ಕೈಬಿಡುವಂತೆ ಮನವಿ ಮಾಡಿದರು. ಆದರೆ ಮುಖ್ಯಮಂತ್ರಿಗಳ ಮಾತಿಗೆ ಸ್ಪಂದಿಸದ ಉಪನ್ಯಾಸಕರ ಸಂಘದ ಪದಾಧಿಕಾರಿಗಳು, ವೇತನ ತಾರತಮ್ಯ ನಿವಾರಿಸಬೇಕು. ಕುಮಾರನಾಯ್ಕ್ ವರದಿಯನ್ನು ಜಾರಿಗೊಳಿಸುವಂತೆ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸಭೆ ವಿಫಲವಾಗಿದೆ.