ಇಂದು ಪಿಯು ಪರೀಕ್ಷೆ ಮೌಲ್ಯ ಮಾಪಕರ ಜೊತೆಗಿನ ಮಾತುಕತೆ ವಿಫಲವಾದ ನಂತರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ, ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪಿಯು ಬೋರ್ಡ್ ನಿಂದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅನ್ಯಾಯವಾಗಿದೆ. ಅದರೂ ನಾವು ಮರು ಪರೀಕ್ಷೆ ನಡೆಸಲೇಬೇಕಾಗಿದೆ ಅನಿರ್ವಾತೆ ಇದೆ. ಹೀಗಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.