ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬರ ವಿಚಾರದಲ್ಲಿ ಯಡಿಯೂರಪ್ಪ ರಾಜಕಾರಣ ಮಾಡುತ್ತಿದ್ದಾರೆ. ನಾವೇನೂ ಕಾಟಾಚಾರಕ್ಕೆ ಬರ ಅಧ್ಯಯನ ನಡೆಸುತ್ತಿಲ್ಲ, ಯಡಿಯೂರಪ್ಪನವರಿಗೆ ಮಾಹಿತಿ ಕೊರತೆ ಇದೆ. ಸರಿಯಾಗಿ ತಿಳಿದುಕೊಂಡು ಮಾತನಾಡಲಿ ಎಂದು ಕಿಡಿ ಕಾರಿದರು.