ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಚಂದ್ರಶೇಖರಯ್ಯ ನೇಮಕಾತಿ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿ, ಈ ತೀರ್ಪಿನ ಅನ್ವಯ ನೂತನ ಲೋಕಾಯುಕ್ತರ ನೇಮಕಾತಿ ಸಂದರ್ಭದಲ್ಲಿ ಲೋಕಾಯುಕ್ತ ಸಲಹಾ ಸಮಿತಿ ಸಭೆಯಲ್ಲಿ ನೂತನ ಲೋಕಾಯುಕ್ತರ ಬಗ್ಗೆ ಸಂಪೂರ್ಣ ಚರ್ಚೆಯಾಗಬೇಕು. ಸಾಧಕ- ಬಾಧಕಗಳ ಬಗ್ಗೆಯೂ ಚರ್ಚೆ ನಡೆಯಬೇಕು. ಆದರೆ ಇಲ್ಲಿ ಈ ರೀತಿಯ ಚರ್ಚೆ ಆಗಿಲ್ಲ ಎಂದು ರಾಜ್ಯಪಾಲರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.