ಆರೋಪಿ ಶಿವಕುಮಾರಸ್ವಾಮಿ ಚಾಣಾಕ್ಷನಾಗಿದ್ದು, ಪದೇಪದೆ ಸ್ಥಳ ಬದಲಾಯಿಸುತ್ತಿದ್ದ, ಆದರೂ ಸಿಐಡಿ ಎಸ್ ಪಿ ಸಿರಿಗೌರಿ ನೇತೃತ್ವದ ತಂಡ ಕಿಂಗ್ ಪಿನ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಕರಣ ಸಂಬಂಧ ಇದುವರೆಗೆ ಶಿವಕುಮಾರ್ ಸೇರಿ 12 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಐಡಿ ಎಡಿಜಿಪಿ ಸಿ,ಎಚ್.ಪ್ರತಾಪ್ ರೆಡ್ಡಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.