ಡಿಯು ಪ್ರಾಧ್ಯಾಪಕಿ ಸುಂದರ್ ಅವರನ್ನು ಬಂಧಿಸುವುದಿಲ್ಲ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಛತ್ತೀಸಘರ್

ಛತ್ತೀಸಘರ್ ನ ಸುಕ್ಮಾ ಜಿಲ್ಲೆಯಲ್ಲಿ ಕೊಲೆಯಾಗಿರುವ ಆದಿವಾಸಿ ಸಮುದಾಯಕ್ಕೆ ಸೇರಿದ ಶಮಂತ್ ಬಘೇಲ್ ಅವರ ಕೊಲೆ ಆರೋಪ ಪ್ರಕರಣದಲ್ಲಿ ಹೆಸರಿಸಲಾಗಿರುವ ದೆಹಲಿ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ
ದೆಹಲಿ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ನಂದಿನಿ ಸುಂದರ್
ದೆಹಲಿ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ನಂದಿನಿ ಸುಂದರ್
Updated on
ನವದೆಹಲಿ: ಛತ್ತೀಸಘರ್ ನ ಸುಕ್ಮಾ ಜಿಲ್ಲೆಯಲ್ಲಿ ಕೊಲೆಯಾಗಿರುವ ಆದಿವಾಸಿ ಸಮುದಾಯಕ್ಕೆ ಸೇರಿದ ಶಮಂತ್ ಬಘೇಲ್ ಅವರ ಕೊಲೆ ಆರೋಪ ಪ್ರಕರಣದಲ್ಲಿ ಹೆಸರಿಸಲಾಗಿರುವ ದೆಹಲಿ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ನಂದಿನಿ ಸುಂದರ್ ಅವರನ್ನು ಬಂಧಿಸುವುದಿಲ್ಲ ಎಂದು ಛತ್ತೀಸಘರ್ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. 
ನವೆಂಬರ್ ೪ ರಂದು ಮಾವೋವಾದಿಗಳು ಕೊಲೆ ಮಾಡಿದ್ದಾರೆ ಎಂಬ ಈ ಪ್ರಕರಣದಲ್ಲಿ ಸುಂದರ್ ಮತ್ತು ಇತರ ನಾಗರಿಕ ಸಾಮಾಜಿಕ ಕಾರ್ಯಕರ್ತರನ್ನು ಹೆಸರಿಸುವ ಎಫ್ ಐ ಆರ್ ಗೆ ತಡೆ ನೀಡುವ ಸಾಧ್ಯತೆಯಿದೆ ಎಂದು ನ್ಯಾಯಾಧೀಶ ಮದನ್ ಬಿ ಲೋಕುರ್ ಮತ್ತು ನ್ಯಾಯಾಧೀಶ ಆದರ್ಶ್ ಕುಮಾರ್ ಗೋಯಲ್ ಒಳಗೊಂಡ ನ್ಯಾಯಪೀಠ ಸೂಚಿಸಿದ ಹಿನ್ನಲೆಯಲ್ಲಿ ಛತ್ತೀಸಘರ್ ಸರ್ಕಾರ ಈ ಸ್ಪಷ್ಟನೆ ನೀಡಿದೆ. 
ಸುಂದರ್ ವಿರುದ್ಧ ಯಾವುದೇ ಒತ್ತಾಯಪೂರ್ವಕ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೋರ್ಟ್ ಗೆ ತಿಳಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಂದಿನ ವಿಚಾರಣೆ ನವೆಂಬರ್ ೧೫ ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. 
ಈ ಕೊಲೆ ಪ್ರಕರಣದಲ್ಲಿ ಸುಂದರ್ ಅವರನ್ನು ಹೆಸರಿಸಿರುವ ಬಗ್ಗೆ ಪ್ರಶ್ನಿಸಿದ ಕೋರ್ಟ್ "ನೀವು ಪರಿಸ್ಥಿತಿಯನ್ನು ಹೆಚ್ಚು ಜಟಿಲಗೊಳಿಸುತ್ತಿದ್ದೀರಿ. ನೀವು ಪರಿಸ್ಥಿತಿಯ ಬಗ್ಗೆ ವಿವೇಚನೆಯ ದೋರಣೆ ತಳೆದು, ಸರಿಯಾದ ಉತ್ತರಗಳನ್ನು ಕಂಡುಹಿಡಿಯಯಬೇಕು" ಎಂದು ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com