ಇದೇ ವೇಳೆ ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಿಎಂ, ಕೇಂದ್ರದ ಕ್ರಮದಿಂದಾಗಿ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ರೈತರು, ಬಡವರು, ಕೂಲಿ ಕಾರ್ಮಿಕರು ತಮ್ಮ ಕೆಲಸಗಳನ್ನು ಬಿಟ್ಟು ಬ್ಯಾಂಕ್ ಗಳ ಮುಂದೆ ನಿಲ್ಲುವಂತಾಗಿದೆ. ಇದಕ್ಕೆ ಪೂರ್ವ ಸಿದ್ಧತೆಯ ಕೊರತೆ ಕಾರಣ ಎಂದರು. ಅಲ್ಲದೆ ಈ ಸಂಬಂಧ ತಾವು ಕೇಂದ್ರ ಹಣಕಾಸು ಸಚಿವರಿಗೆ ಪತ್ರಬರೆದಿರುವುದಾಗಿ ಹಾಗೂ ಆರ್ ಬಿಐ ಮುಖ್ಯಸ್ಥರಿಗೂ ಪತ್ರ ಬರೆಯುವುದಾಗಿ ತಿಳಿಸಿದರು.