ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಇಲಾಖೆಯಲ್ಲಿ "ಕಳ್ಳ ಠೇವಣಿ' ಪ್ರಕರಣ ಬೆಳಕಿಗೆ ಬಂದ ಮೇಲೆ ಅದರ ತನಿಖೆ ನಡೆಸಲು ಐಎಎಸ್ ಅಧಿಕಾರಿ ಪುನಟಿ ಶ್ರೀಧರ್ ನೇತೃತ್ವದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ವರದಿಯ ಆಧಾರದಲ್ಲಿ ಲೆಕ್ಕಪರಿಶೋಧನೆ ಕೈಗೊಳ್ಳಲು ರಾಜ್ಯ ಲೆಕ್ಕಪತ್ರ ಇಲಾಖೆಯ ಅಪರ ನಿರ್ದೇಶಕ ಬಿ.ಎನ್. ಶಿವರುದ್ರಪ್ಪ ಅವರ ನೇತೃತ್ವದ ಸಮಿತಿ ರಚಿಸಲಾಗಿತ್ತು. ಇದೀಗ ಶಿವರುದ್ರಪ್ಪ ಸಮಿತಿಯು ವರದಿ ನೀಡಿದ್ದು, ಅದರಂತೆ ಇಲಾಖೆಯಲ್ಲಿ 2009 ರಿಂದ 2013-14ನೇ ಅವಧಿಯಲ್ಲಿ 106 ಬೇನಾಮಿ ಬ್ಯಾಂಕ್ ಖಾತೆಗಳ ಮೂಲಕ 10 ಸಾವಿರ ಕೋಟಿ ರು. ಅಕ್ರಮ ವಹಿವಾಟು ನಡೆದಿರುವುದು ಪುರಾವೆಗಳ ಸಮೇತ ಸಾಬೀತಾಗಿದೆ ಎಂದರು.