ಸೆ.30ರಂದು ಸುಪ್ರೀಂ ಕೋರ್ಟ್ ಮಂಗಳವಾರದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅಂದು ಮಂಡಳಿ ರಚನೆ ಮಾಡುವುದಾಗಿ ಹೇಳಿದ್ದ ಕೇಂದ್ರ ನಿನ್ನೆ ಯೂ-ಟರ್ನ್ ಹೊಡೆದಿದ್ದು, ಮಂಡಳಿ ರಚನೆ ಅಧಿಕಾರ ಸಂಸತ್ತಿಗಿದ್ದು, ಸದ್ಯ ಮಂಡಳಿ ರಚನೆ ಅಸಾಧ್ಯ ಎಂದು ಕೋರ್ಟ್ ಗೆ ತಿಳಿಸಿದೆ.