ಇದಕ್ಕೂ ಮುನ್ನ ಕರ್ನಾಟಕ ಸೆ.30ರ ಆದೇಶ ಪಾಲಿಸುವುದಾಗಿ ಕೋರ್ಟ್ ಗೆ ತಿಳಿಸಿದ ರಾಜ್ಯದ ಪರ ವಕೀಲ ಫಾಲಿ ಎಸ್. ನಾರಿಮನ್ ಅವರು, ತಮಿಳುನಾಡಿಗೆ 6 ದಿನಗಳ ಕಾಲ ನೀರು ಹರಿಸುತ್ತೇವೆ. 6 ದಿನಗಳಲ್ಲಿ ಒಟ್ಟು 36,000 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದರು. ಈ ವೇಳೆ ಅ.7ರಿಂದ 18ರವರೆಗೆ ಏನು ಮಾಡುತ್ತೀರಿ? ನಿಮ್ಮಿಂದ ಎಷ್ಟು ನೀರು ಬಿಡಲು ಸಾಧ್ಯ ಎಂದು ಕೋರ್ಟ್ ಮತ್ತೆ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ನಾರಿಮನ್ ಅವರು ಅ.7ರಿಂದ 18ರವರೆಗೆ ನಿತ್ಯ 1,500 ಕ್ಯೂಸೆಕ್ ನೀರು ಬಿಡಲು ಒಪ್ಪಿಗೆ ಸೂಚಿಸಿದರು. ಅಂತಿಮವಾಗಿ ಕೋರ್ಟ್ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ.