ನಂತರ ಯಡಿಯೂರಪ್ಪ ಅವರು ಈಗ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಅನುಮತಿಯ ಅಗತ್ಯವಿಲ್ಲ ಎಂದು ಹಾಲಿ ರಾಜ್ಯಪಾಲ ವಿಆರ್ ವಾಲಾ ತಿಳಿಸಿದ್ದರಿಂದ, ಬಾಷಾ ಅವರು 5 ಪ್ರಕರಣಗಳನ್ನು ರದ್ದುಪಡಿಸಿರುವ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ನಿಗದಿಪಡಿಸಿದೆ. ಏತನ್ಮಧ್ಯೆ ರಾಜ್ಯಪಾಲರ ಅನುಮತಿ ಅಗತ್ಯ ಇಲ್ಲದ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಮತ್ತೆ ಬಿಎಸ್ ವೈ ವಿರುದ್ಧ ದೂರು ಸಲ್ಲಿಸಿದ್ದಾರೆ.