ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಎಐಡಿಎಂಕೆ ಪಕ್ಷದ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ನೀಡಿದ ದೂರಿನ ಮೇಲೆ, ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಭೀತಿ ಹಬ್ಬಿಸುತ್ತಿದ್ದಾರೆ ಎಂದು ಸತೀಶ್ ಕುಮಾರ್ ಮತ್ತು ಮಾದಸ್ವಾಮಿ ಎಂಬುವವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಜಯಲಲಿತಾ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹರಡಿದ್ದಾರೆ ಎಂಬ ದೂರಿನ ಮೇರೆಗೆ ಪೊಲೀಸರು ಇಲ್ಲಿಯವರೆಗೆ 43 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಜ್ವರ ಮತ್ತು ದೇಹದಲ್ಲಿ ನೀರಿನ ಅಂಶದ ಕೊರತೆಯಿಂದಾಗಿ 68 ವರ್ಷದ ಮುಖ್ಯಮಂತ್ರಿಯವರನ್ನು ಸೆಪ್ಟೆಂಬರ್ 22 ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇನ್ನು ಆಸ್ಪತ್ರೆಯಲ್ಲಿಯೇ ಉಳಿದಿದ್ದು, ಚೇತರಿಸಿಕೊಳುತ್ತಿರುವುದಾಗಿ ಅಪೋಲೋ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.