ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆ ನಡೆಸಿದ ನಿರ್ಧಿಷ್ಟ ದಾಳಿಯ ಶ್ರೇಯಸ್ಸಿನ ದೊಡ್ಡ ಭಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂಬ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಹೇಳಿಕೆಯನ್ನು ಬುಧವಾರ ಖಂಡಿಸಿರುವ ವಿರೋಧ ಪಕ್ಷಗಳು, ಬಿಜೆಪಿ ಈ ದಾಳಿಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.