ನಿತೀಶ್ ಕುಮಾರ್
ಪ್ರಧಾನ ಸುದ್ದಿ
ಸಮಾಜವಾದಿ ಪಕ್ಷದ ರಜತ ಮಹೋತ್ಸವಕ್ಕೆ ನಿತೀಶ್ ಕುಮಾರ್ ಗೈರು ಸಾಧ್ಯತೆ
ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಪಾಟ್ನಾ: ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗುವ ಸಾಧ್ಯತೆಯಿದೆ.
ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.
ಆದರೆ ನವೆಂಬರ್ 5 ರಂದು ಬಿಹೀರದಲಿಲು ಪ್ರಸಿದ್ಧ ಚಾತ್ ಪೂಜಾ ಹಬ್ಬವಿದ್ದು, ಅದರಲ್ಲಿ ಪಾಲ್ಗೊಳ್ಳಬೇಕಿದೆ. ಹೀಗಾಗಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.
ಆದರೆ ಲಾಲು ಪ್ರಸಾದ್ ಯಾದವ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ