ರಾಮಕುಮಾರ್ ತಂದೆಯ ಪರವಾಗಿ ವಾದ ಮಂಡಿಸಿದ ವಕೀಲ ಶಂಕರಸುಬ್ಬು, ಮುಂದಿನ ವಿಚಾರಣೆ ನಡೆಯುವವರಿಗೆ ಮರಣೋತ್ತರ ಪರೀಕ್ಷೆ ನಡೆಸದಂತೆ ಆದೇಶ ನೀಡಲು ನ್ಯಾಯಾಧೀಶ ಶಿವಜ್ಞಾನಂ ಅವರಲ್ಲಿ ಮನವಿ ಮಾಡಿದ್ದರು. ಹಾಗೆಯೇ ಮರಣೋತ್ತರ ಪರೀಕ್ಷೆ ನಡೆಸುವಾಗ ತಮ್ಮ ಕಕ್ಷಿದಾರ ಬಯಸುವ ವೈದ್ಯರು ಅಲ್ಲಿರುವಂತೆ ಮತ್ತು ಅದನ್ನು ವಿಡಿಯೋ ಮಾಡಲು ಅವಕಾಶ ಕೋರಿದ್ದರು. ಇದರ ವಿಚಾರಣೆಗೆ ಮರು ಅರ್ಜಿ ಸಲ್ಲಿಸುವಂತೆ ಕೋರ್ಟ್ ತಿಳಿಸಿದ್ದು, ಇಂದೇ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.