ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ತಲುಪಿದ್ದು, ಇಂತಹ ಸ್ಥಿತಿಯಲ್ಲೂ ಕರ್ನಾಟಕ ತಮಿಳುನಾಡಿಗೆ ಸೆ.27 ವರೆಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರಿನಂತೆ ಒಟ್ಟು 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ ಈ ಆದೇಶ ಪಾಲಿಸಲು ಸಾಧ್ಯವಾಗದು ಎಂಬ ಒಕ್ಕೊರಲ ಅಭಿಪ್ರಾಯ ಸಂಪುಟ ಸಭೆಯಲ್ಲಿ ವ್ಯಕ್ತವಾಗಿದೆ.