ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು ಈ ಸಂಬಂಧ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸಾಯೇಗಾಂವ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ರಾಷ್ಟ್ರೀಯ ಜಲನೀತಿ ಪ್ರಕಾರ ಕುಡಿಯುವ ನೀರಿಗೆ ಮೊದಲ ಆದ್ಯತೆ ಇದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡು ಅಂದಾಕ್ಷಣ ನಾವು ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಆದೇಶದ ಸಂಪೂರ್ಣ ಮಾಹಿತಿ ಇಲ್ಲ. ನಮ್ಮ ವಕೀಲರಿಂದ ಮಾಹಿತಿ ಪಡೆದು ನಂತರ ಯೋಚಿಸಲಾಗುವುದು ಎಂದು ಹೇಳಿದ್ದಾರೆ.