ವಾದ ಪ್ರತಿವಾದ ಆಲಿಸಿದ ಕೋರ್ಟ್, ತಮಿಳುನಾಡಿಗೆ ನಾಳೆ ಮತ್ತು ನಾಡಿದ್ದು ನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶಿಸಿ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ. ಅಲ್ಲದೆ ನಿಮ್ಮ ನಿರ್ಣಯ ಏನೇ ಇದ್ದರೂ ಮೊದಲು ಕೋರ್ಟ್ ಆದೇಶವನ್ನು ಪಾಲಿಸಿ ಮತ್ತು ನೀರು ಹರಿಸುವಂತೆ ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟವಾಗಿ ಸೂಚಿಸಿದೆ.