ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡ ಸಂದರ್ಭದಲ್ಲಿ ವಿದೇಶ ಪ್ರವಾಸದಲ್ಲಿ ಅಂಬರೀಶ್ ಬಗ್ಗೆ ವ್ಯಾಪಕವಾಗಿ ಟೀಕೆ, ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ದಿಢೀರ್ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಂಡ್ಯದ ಗಂಡು, ನಾನೇನು ಮೋಜು ಮಾಡಲು, ಐಷಾರಾಮಿ ಜೀವನ ನಡೆಸಲು ಅಮೆರಿಕಕ್ಕೆ ಹೋಗಿರಲಿಲ್ಲ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಹೋಗಿದ್ದೆ. ಅಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಮಾತನಾಡಿದ್ದೇನೆ ಎಂದರು.