ನಾವು ಆದೇಶ ಮಾರ್ಪಾಡು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ್ದೇವು, ತಮಿಳುನಾಡು ಕೂಡಾ ಒಂದು ಅರ್ಜಿ ಹಾಕಿತ್ತು. ನಮ್ಮ ಅರ್ಜಿ ಜೊತೆ ಸದನದಲ್ಲಿ ಕೈಗೊಂಡ ನಿರ್ಣಯವನ್ನು ಲಗತ್ತಿಸಿದ್ದೇವು. ಸುಪ್ರೀಂಕೋರ್ಟ್ ನೀಡಿರುವ ಆದೇಶದಲ್ಲಿ ಎರಡು ಅಂಶಗಳಿವೆ. ಒಂದು ಮೂರು ದಿನಗಳ ಕಾಲ ಮತ್ತೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಮತ್ತೊಂದು ಅಟಾರ್ನಿ ಜನರಲ್ ಗೆ ಕೇಂದ್ರ ಮಧ್ಯಸ್ಥಿಕೆ ವಹಿಸಲು ಸೂಚಿಸಿದೆ, ಹಾಗಾಗಿ ನಾಳಿನ ಸಭೆಯಲ್ಲಿ ಏನಾಗುತ್ತೆ ನೋಡೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.