ಪ್ರಚೋದನೆಗೆ ತಕ್ಕ ಫಲ; ಭಾರತೀಯ ಯೋಧರ ಗುಂಡಿಗೆ 2 ಪಾಕ್ ಸೈನಿಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರ ಅಪ್ರಚೋದಿತ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಪಾಕಿಸ್ತಾನಿ ಸೈನಿಕರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರ ಅಪ್ರಚೋದಿತ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಪಾಕಿಸ್ತಾನಿ ಸೈನಿಕರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪೂಂಚ್ ಜಿಲ್ಲೆಯ ದನಿಶ್ ಮತ್ತು ಲಕ್ಷ್ಮಿ ಪೋಸ್ಟ್ ಗಳ ಮೇಲೆ ಪಾಕಿಸ್ತಾನಿ ಸೈನಿಕರು ಗುಂಡಿನ ದಾಳಿ ನಡೆಸಿದಾಗ ಅದಕ್ಕೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ  ವೇಳೆ ಭಾರತೀಯ ಯೋಧರು ಸಿಡಿಸಿದ ಗುಂಡಿನ ದಾಳಿಗೆ ಇಬ್ಬರು ಪಾಕಿಸ್ತಾನಿ ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪೂಂಚ್ ಸೆಕ್ಟರ್ ನ ಸಬ್ಜಿಯಾನ್ ಪ್ರದೇಶದಲ್ಲೂ  ಅಪ್ರಚೋದಿತ ದಾಳಿ ನಡೆದಿದ್ದು, ಇಲ್ಲಿಯೂ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಮಾಹಿತಿ ನೀಡಿದ್ದು, ದಾಳಿಯಲ್ಲಿ ಇಬ್ಬರು ಪಾಕ್ ಯೋಧರು ಸಾವನ್ನಪ್ಪಿ 6 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸಬ್ಜಿಯಾನ್ ಪ್ರದೇಶದಲ್ಲಿ ಭಾರತೀಯ ಯೋದರು ಪಹರೆ ನಡೆಸುತ್ತಿದ್ದಾಗ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಯಾವೊಬ್ಬ ಯೋಧರೂ ಗಾಯಗೊಂಡಿಲ್ಲ ಎಂದು ಸೇನಾಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com